ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

ನಮ್ಮ ಶಾಲೆಯಲ್ಲಿ 2017-18 ನೇ ಶೈಕ್ಷಣಿಕ ವರ್ಷದ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯು ತಾರೀಕು ೦೧-೦೭-೨೦೧೭ನೇ ಶನಿವಾರ ಶಾಲಾ ಸಭಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು 2016-17ನೇ ವರ್ಷದ ಪಿ.ಟಿ.ಎ ಅಧ್ಯಕ್ಷರಾದ ಥಾಮಸ್ ಡಿ. ಸೋಜಾ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ ರಾವ್ ಆರ್.ಎಂ,ಮುಖ್ಯೋಪಾಧ್ಯಾಯರಾದ ಸುಧಾಕರ.ವಿ,ಎಂ.ಪಿ.ಟಿ.ಎ ಅಧ್ಯಕ್ಷೆ ಸ್ವಪ್ನಾ.ಪಿ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಸುಧಾಕರ್.ವಿ ಸ್ವಾಗತಿಸಿ ಹೆತ್ತವರಿಗೆ ಈ ವರ್ಷದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು  ನೀಡಿದರು.ಇದೇ ಸಂದರ್ಭದಲ್ಲಿ 2016-17 ನೇ ಸಾಲಿನ ಎಲ್.ಎಸ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸ್ಕಾಲರ್ ಶಿಪ್ ಗೆ ಅಹ್ರತೆಯನ್ನು ಪಡೆದುಕೊಂಡ ವಿದ್ಯಾರ್ಥಿಗಳಾದ ಲಿಖಿತ ಎಂ.ಎಸ್,ಜಯಪ್ರದಾ ಹಾಗೂ ಸುಷ್ಮಿತಾ ಇವರಿಗೆ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.ತಡ ನಂತರ ಈ ವರ್ಷದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ತಿಮ್ಮಪ್ಪ ಭಟ್,ಉಪಾಧ್ಯಕ್ಷರಾಗಿ ನಾರಾಯಣ್ ಉಜಿರೆ,ಎಂ.ಪಿ.ಟಿ.ಎ ಅಧ್ಯಕ್ಷೆಯಾಗಿ ಝೀನತ್,ಉಪಾಧ್ಯಕ್ಷೆಯಾಗಿ ಸೌಮ್ಯ ಇವರನ್ನು ಆಯ್ಕೆ ಮಾಡಲಾಯಿತು.ಕಾರ್ಯಕ್ರಮವನ್ನುಅಧ್ಯಾಪಕರಾದ ಹರೀಶ್ ಸುಲಾಯ ನಿರೂಪಿಸಿದರು,ಶಾಲಾ ಸ್ಟಾಫ್ ಸೆಕ್ರೆಟರಿ ರಾಮಚಂದ್ರ. ಕೆ.ಎಂ ವಂದಿಸಿದರು.










  

Comments

Popular posts from this blog

ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ 2024-25 @ VAUPS MIYAPADAVU