ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ
ವಿದ್ಯಾವರ್ಧಕ ಎ. ಯು.ಪಿ ಶಾಲೆ ಮೀಯಪದವಿನಲ್ಲಿ 2019-20 ನೇ ಶೈಕ್ಷಣಿಕ ವರ್ಷದ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ರಾಮಕೃಷ್ಣ ರಾವ್ ಸಭಾಭವನದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷರಾದ ತಿಮ್ಮಪ್ಪ ಭಟ್ ವಹಿಸಿದ್ದರು.ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಲಹೆಗಾರರದ ಶ್ರೀಧರ ರಾವ್ ಆರ್.ಎಂ ,ಶಾಲಾ ಎಂ.ಪಿ.ಟಿ.ಎ ಅಧ್ಯಕ್ಷೆ ಸೌಮ್ಯ ಪ್ರಕಾಶ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ ವಿ ಕಾರ್ಯಕ್ರಮವನ್ನು ಸ್ವಾಗತಿಸಿ, ಪ್ರಾಸ್ತಾವಿಕ ಭಾಷಣ ಗೈದರು.ನಂತರ ನಡೆದ ಕಾರ್ಯಕಾರಿ ಸಮಿತಿಯಲ್ಲಿ 2019-20 ನೇ ಸಾಲಿನ ನೂತನ ಪಿ.ಟಿ.ಎ ಅಧ್ಯಕ್ಷರಾಗಿ ಕೃಷ್ಣ ಪ್ರಸಾದ್ ,ಉಪಾಧ್ಯಕ್ಷರಾಗಿ ಇಬ್ರಾಹಿಂ ಹೊನ್ನಕಟ್ಟೆ ,ಎಂ.ಪಿ.ಟಿ.ಎ ಅಧ್ಯಕ್ಷೆಯಾಗಿ ಕೈರುನ್ನಿಸ ಹಾಗೂ ಉಪಾಧ್ಯಕ್ಷೆಯಾಗಿ ಸಂಧ್ಯಾಶ್ರೀ ಆಯ್ಕೆಯಾದರು.ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕರಾದ ಅರವಿಂದಾಕ್ಷ ಭಂಡಾರಿ ನಿರೂಪಿಸಿದರು.ಶಾಲಾ ಅಧ್ಯಾಪಕಿ ರತ್ನಾವತಿ ಧನ್ಯವಾದವನ್ನಿತ್ತರು.


Comments
Post a Comment