ನೂತನ ಕಂಪ್ಯೂಟರ್ ಗಳ ಹಸ್ತಾಂತರ ಹಾಗೂ ಉದ್ಘಾಟನಾ ಕಾರ್ಯಕ್ರಮ

ಮೀಯಪದವು ವಿದ್ಯಾವರ್ಧಕ ಎ. ಯು.ಪಿ ಶಾಲೆಗೆ ತಿಂಬರ ಅರವಿಂದ ಹೊಳ್ಳ ಇವರ ಪ್ರಯತ್ನದಿಂದ ಟಿ.ಸಿ.ಎಸ್ ಕಂಪೆನಿ ವತಿಯಿಂದ ದೊರಕಿದ 10 ಕಂಪ್ಯೂಟರ್ ಗಳ ಹಸ್ತಾಂತರ ಹಾಗೂ ಉದ್ಘಾಟನಾ ಕಾರ್ಯಕ್ರಮ ಶಾಲಾ ರಾಮಕೃಷ್ಣ ರಾವ್ ಸಭಾಂಗಣದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷರಾದ ಕೃಷ್ಣ ಪ್ರಸಾದ್  ವಹಿಸಿದ್ದರು.ಕಾರ್ಯಕ್ರಮವನ್ನು ತಿಂಬರ ಸುಬ್ರಾಯ ಹೊಳ್ಳರು ಕಂಪ್ಯೂಟರ್ ನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ತಿಂಬರ ಲೀಲಾ ಹೊಳ್ಳ ಹಾಗೂ ಶಾಲಾ ಎಂಪಿಟಿಎ ಅಧ್ಯಕ್ಷೆ ಕೈರುನ್ನಿಸ ಉಪಸ್ಥಿತರಿದ್ದರು.ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ್ ರಾವ್ ಆರ್.ಎಂ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸುಧಾಕರ.ವಿ ಸ್ವಾಗತಿಸಿ,ಶಾಲಾ ಅಧ್ಯಾಪಿಕೆ ನಳಿನಿ.ಎ ವಂದಿಸಿದರು.ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕ ರಘುವೀರ್ ರಾವ್ ನಿರೂಪಿಸಿದರು.




Comments

Popular posts from this blog

ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ 2024-25 @ VAUPS MIYAPADAVU