ಕಿರಿಯ ಪ್ರಾಥಮಿಕ ಮಟ್ಟದ ಬಾಲಸಭೆ ಉದ್ಘಾಟನೆ

 ವಿದ್ಯಾವರ್ಧಕ ಎ. ಯು.ಪಿ ಶಾಲೆ ಮೀಯಪದವಿನಲ್ಲಿ ಕಿರಿಯ ಪ್ರಾಥಮಿಕ ಮಟ್ಟದ ಬಾಲಸಭೆಯ ಉದ್ಘಾಟನಾ ಕಾರ್ಯಕ್ರಮ ಶ್ರೀ ಯಂ ರಾಮಕೃಷ್ಣ ರಾವ್ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ ಜರಗಿತು.ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಅರವಿಂದಾಕ್ಷ ಭಂಡಾರಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಕಾರ್ಯಕ್ರಮಕ್ಕೆ ಶಾಲಾ ಹಿರಿಯ ಅಧ್ಯಾಪಕರಾದ ನಾರಾಯಣ.ಯು ಹಾಗೂ ಶಾಲಾ ಯು.ಪಿ ಎಸ್.ಆರ್.ಜಿ ಕನ್ವಿನರ್ ವಿಘ್ನೇಶ್ ಎಸ್ ಶುಭ ಹಾರೈಸಿದರು. ನಂತರ ಪುಟಾಣಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ರಂಗೇರಿದವು.ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕಿ ಸ್ವಾತಿ ಸ್ವಾಗತಿಸಿ,ಯಾಸ್ಮಿನ್ ವಂದಿಸಿದರು.ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕ ಸುಶಾಂತ್ ನಿರೂಪಿಸಿದರು.

















Comments

Popular posts from this blog

ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ 2024-25 @ VAUPS MIYAPADAVU