ದಿ. ಯಂ ರಾಮಕೃಷ್ಣ ರಾವ್ ಸಂಸ್ಮರಣೆ ಕಾರ್ಯಕ್ರಮ

ಸಾಧನೆ ಮತ್ತು ಕಳಂಕ ರಹಿತ ವ್ಯಕ್ತಿ ಯಾವಾಗಲೂ ಎತ್ತರಕ್ಕೆ ಏರಬಲ್ಲ- ಡಾ.ಕಿಶೋರ್ ರೈ ಶೇಣಿ

ಮೀಯಪದವು ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ಸಂಚಾಲಕರಾಗಿ , ಅಧ್ಯಾಪಕರಾಗಿ ಮೀಂಜ  ಪ್ರದೇಶದ ವಿದ್ಯಾಭ್ಯಾಸ ಕ್ಷೇತ್ರದ ಧ್ರುವತಾರೆಯೆನಿಸಿಕೊಂಡಿರುವ ದಿ. ಯಂ ರಾಮಕೃಷ್ಣ ರಾವ್ ಅವರ 17ನೇ ಪುಣ್ಯತಿಥಿಯ ಸಂದರ್ಭ ಸಂಸ್ಮರಣೆ ಹಾಗೂ ಸನ್ಮಾನ ಕಾರ್ಯಕ್ರಮ ಶಾಲಾ ರಂಗಮಂಟಪದಲ್ಲಿ ಬಹಳ ವಿಜೃಂಭಣೆಯಿಂದ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿಗಳಾದ ದಿನೇಶ್.ವಿ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಗಳಾಗಿ ಆಗಮಿಸಿದ ಪೆರ್ಲದ ನಾಲಂದ ವಿದ್ಯಾಲಯದ ಪ್ರಾಚಾರ್ಯರಾದ  ಡಾ.ಕಿಶೋರ್ ಕುಮಾರ್ ರೈ ಶೇಣಿ ಮಾತನಾಡಿ ಸಾಧನೆ ಮತ್ತು ಕಳಂಕ ರಹಿತ ವ್ಯಕ್ತಿ ಯಾವಾಗಲೂ ಎತ್ತರಕ್ಕೆ ಏರಬಲ್ಲ ಎಂಬುದಕ್ಕೆ ರಾಮಕೃಷ್ಣ ರಾವ್ ಇವರೇ ಸಾಕ್ಷಿ ಎಂದರು. ಇದೇ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ರವೀಂದ್ರ ಮುನ್ನಿಪ್ಪಾಡಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.ಸಭಾ ಕಾರ್ಯಕ್ರಮದ ನಂತರ ಶಾಲಾ ಅಧ್ಯಾಪಕರಾದ  ನಾರಾಯಣ ನಾವಡ ನಿರ್ದೇಶನದ ಶಿವಾನುಗ್ರಹ ಎಂಬ ವಿದ್ಯಾವರ್ಧಕ ಬಾಲಿಕೆಯರ ಯಕ್ಷಗಾನ ತಾಳ ಮದ್ದಳೆ ಜರಗಿತು.ಕಾರ್ಯಕ್ರಮವನ್ನು ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ್ ರಾವ್ ಸ್ವಾಗತಿಸಿ ಶಾಲಾ ಮುಖ್ಯೋಪಾಧ್ಯಯರಾದ ಅರವಿಂದಾಕ್ಷ ಭಂಡಾರಿ ದನ್ಯವಾದವಿತ್ತರು. ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕರಾದ ರಾಮಚಂದ್ರ.ಕೆ.ಎಂ ನಿರೂಪಿಸಿದರು.














 

Comments

Popular posts from this blog

ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ 2024-25 @ VAUPS MIYAPADAVU