ಉಚಿತ ವೈದ್ಯಕೀಯ ಶಿಬಿರ ಹಾಗು ಉಚಿತ ದಂತ ಚಿಕಿತ್ಸಾ ಶಿಬಿರ

ಶ್ರೀ ಸತ್ಯ ಸಾಯಿ ಸೇವಾ ಸಮಿತಿ,ಈಶ್ವರಾಂಬಾ ಟ್ರಸ್ಟ್(ರಿ.) ಗಾಂಧಿ ನಗರ ಮಂಗಳೂರು ಇವರ ಆಶ್ರಯದಲ್ಲಿ ವಿದ್ಯಾವರ್ಧಕ ಎ.ಯು.ಪಿ ಶಾಲೆ ಇದರ ಸಹಕಾರದೊಂದಿಗೆ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯ ನುರಿತ ವೈದ್ಯರಿಂದ ಉಚಿತ ವೈದ್ಯಕೀಯ ಶಿಬಿರ ಮತ್ತು ಯೆನೆಪೋಯ ದಂತ ವೈದ್ಯಕೀಯ ಆಸ್ಪತ್ರೆ ದೇರಳಕಟ್ಟೆ ಇವರ ವೈದ್ಯರ ತಂಡದವರಿಂದ ಉಚಿತ ದಂತ ಚಿಕಿತ್ಸಾ ಶಿಬಿರವು  ದಿನಾಂಕ 16-07-2017ನೇ ಆದಿತ್ಯವಾರ ವಿ.ಎ.ಯು.ಪಿ ಶಾಲಾ ವಠಾರದಲ್ಲಿ  ಜರಗಿತು. ಸುಮಾರು 400 ಕ್ಕಿಂತಲೂ ಹೆಚ್ಚು ಜನರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು.







Comments